ಭೂತಾರಾಧನೆಯಲ್ಲಿ ಜಾತಿ ಮತ ಧರ್ಮಗಳ ಸಾಮರಸ್ಯ

ProfileImg
15 May '24
4 min read


image

                              

ತುಳುವರ ಭೂತ ಕನ್ನಡದ ಭೂತವಲ್ಲ.ತುಳುವಿನ ಭೂತ ಪದಕ್ಕೆ ಕನ್ನಡದ ಭೂತ ಎಂಬ ಪದಕೆ ಇರುವಂತೆ ಭೂತ ಪ್ರೇತ ಪಿಶಾಚಿ ಎಂಬ ಕೆಟ್ಟ ಅರ್ಥವಿಲ್ಲ.ತುಳುವರ ಭೂತಗಳು ಜನರನ್ನು ಹೆದರಿಸಿ ಬೆದರಿಸಿ ಕಾಡುವ ಕೆಟ್ಟ ,ಕ್ಷುದ್ರ ಶಕ್ತಿಗಳಲ್ಲ .ತುಳುವರ ಭೂತ ಪದ ದೇವತಾ ವಾಚಿ ಪದ .ದುಷ್ಟ ಶಿಕ್ಷಿಸಿ ಶಿಷ್ಟರನ್ನು ರಕ್ಷಿಸುವ ಸತ್ಯದ ಶಕ್ತಿಗಳು ಇವು.
 

 The Tulu word bhuta may be orginated from Sanskrit word ‘putam’, which means purified. In Hindu mythology, Lord Vishnu is also referred as ‘putam’. So, one interpretation could be that over centuries the word ‘putam’ changed into ‘puto’, then to ‘buto’, and finally become ‘bhuta’.
In Tulu tradition, there is no fixed path to become a bhuta or daiva. Most of the bhutas are basically humans who — blessed with extraordinary powers or having done remarkable work, like questioning social evils — transform into bhutas after death. Ordinary people can also become a bhuta, if they happen to be blessed by their bhuta.

Bhuta kola is a  devine spirit worship is an ancient ritual form of worship of Tuluvas in Tulunadu (undivided dakshina kannada district including udupi and kasaragodu ) which having singing paddana and a special devine dance .Theyyam in kerala  and Bhuta kola in Tulunadu are the same type of  purified spirit worship /devine worship

ಸಂಸ್ಕೃತ ಮೂಲದ ಪೂತಮ್ ಎಂದರೆ ಪವಿತ್ರವಾದದ್ದು ಎಂಬ ಪದವೇ ಕಾಲಾಂತರದಲ್ಲಿ ವರ್ಣ ವ್ಯತ್ಯಯ ಗೊಂಡು ಸಂಸ್ಕೃತೀಕರಣಕ್ಕೊಳಗಾಗಿ ಬೂತೊ>ಭೂತೋ>ಭೂತ ಆಗಿರಬಹುದು .ಕೊಡವರು ಇಂದಿಗೂ ಭೂತವನ್ನು ಪೂದ ಎಂದೇ ಕರೆಯುತ್ತಾರೆ.ತುಳುವಿನಲ್ಲಿ ಪೂ >ಭೂ ಆದರೆ ಕೊಡವರಲ್ಲಿ ತ>ದ ಆಗಿ ವರ್ಣ ಬದಲಾವಣೆ ಆಗಿದೆ ಇದೆ.ಅಥವ ತುಳು ಭೂತಗಳಲ್ಲಿ ಹೆಚ್ಚಿನವರು ಅಸಾಮಾನ್ಯ ಸಾಹಸ ಮರೆದು ದುರಂತವನ್ನಪ್ಪಿ ಮಾಯವಾಗಿ ದೈವತ್ವ ಪಡೆದ ಸಾಂಸ್ಕೃತಿಕ ನಾಯಕರೇ ಆಗಿದ್ದಾರೆ.ಆದ್ದರಿಂದ ಹಿಂದೆ ಇದ್ದವರು ಎಂಬ ಅರ್ಥದಲ್ಲಿಯೂ ಭೂತ ಪದ ಬಳಕೆಗೆ ಬಂದಿರುವ ಸಾಧ್ಯತೆ ಇದೆ
ಇತಿಹಾಸ, ರಾಜಕೀಯ, ಸಂಸ್ಕøತಿ, ಸಾಮಾಜಿಕ, ಜಾನಪದ ಸೇರಿದಂತೆ ಎಲ್ಲ ವಿಚಾರಗಳು ಕೂಡ ತುಳುನಾಡಿನಲ್ಲಿ ದುರಂತ ಮತ್ತು ದೈವತ್ವದೊಂದಿಗೆ ತಳುಕು ಹಾಕಿಕೊಂಡಿದೆ.

.ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಯಾವುದೇ ಜಾತಿ ಭೇದ ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಲ್ಲಾಳದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೊಕ್ಕೊಟು ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ ಅವರು ತಿಳಿಸಿದ್ದಾರ 

ಇಲ್ಲಿ ಬ್ರಾಹ್ಮಣರೂ ಭೂತವಾಗಿದ್ದಾರೆ.ಚಾಮುಂಡಿ,ಭಟ್ಟಿ ಭೂತ ,ಕಚ್ಚೆ ಭಟ್ಟ , ನಾರಳತ್ತಾಯ ಮೊದಲಾದ ಭೂತ ಗಳು ಬ್ರಾಹ್ಮಣ ಮೂಲದ ದೈವತಗಳು .


                                     ನೆಲ್ಲಿತ್ತಾಯ

ರಾಮ ಶೆಟ್ಟಿ ಎಂಬ ವೀರ ಶೈವ ಲಿಂಗಾಯತ ವ್ಯಕ್ತಿ ನೆತ್ತರು ಮುಗಳಿ ಎಂಬ ಭೂತವಾಗಿದ್ದಾನೆ .

ನೈದಾಲ ಪಾಂಡಿ ಕೂಡ ಮೂಲತಃ ಲಿಂಗಾಯತನಾಗಿ ಪರಿವರ್ತಿತನಾದ ರಾಜ ಕುಮಾರ . . ಅಚ್ಚುಬಂಗೇತಿ, ಅಕ್ಕಚ್ಚು ಭೂತ, ಬೊಟ್ಟಿ ಭೂತಗಳು ಮೂಲತಃ ಜೈನ ಧರ್ಮದವರಾಗಿದ್ದಾರೆ.

ಕ್ರಿಶ್ಚಿಯನ್ ತೆಯ್ಯಂಗೆ ಆರಾಧನೆ ಇರುವ ಬಗ್ಗೆ ಕೇಳು ಮಾಸ್ತರ್ ಅಗಲ್ಪಾಡಿ ಅವರು ತಿಳಿಸಿದ್ದಾರೆ . ಅಂತೆಯೇ ತುಳುನಾಡಿನ ಅನೇಕ ಮುಸ್ಲಿಂ ಮೂಲದ ವ್ಯಕ್ತಿಗಳು ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ.


 

                 ಆಲಿ ಭೂತ
ಬಬ್ಬರ್ಯ, ,ಬ್ಯಾರ್ದಿ ಭೂತ, ಬ್ಯಾರಿ ಭೂತ,ಮಾಪುಲೇ ಮಾಪುಳ್ತಿ ಭೂತೊಳು ,ಮಾಪುಳ್ತಿ ಧೂಮಾವತಿ ಮೊದಲಾದವರು ಮುಸ್ಲಿಂ ಮೂಲದ ದೈವತಗಳು. ಹೀಗೆ ಆಲಿ ಭೂತ ಕೂಡಾ ಮುಸ್ಲಿಂ ಮೂಲದ ದೈವ .ಭೂತಗಳಾದ ನಂತರ ಇವರು ಹಿಂದೆ ಯಾರಾಗಿದ್ದರು ಎಂಬ ಪ್ರಶ್ನೆಯೇ ಇರುವುದಿಲ್ಲ .ಎಲ್ಲ ದೈವಗಳೂ ಸಮಾನ .ಎಲ್ಲ ದೈವಗಳಿಗೂ ಒಂದೇ ರೀತಿಯ ಗೌರವ ,ಭಕ್ತಿಯ ನೆಲೆ .ಇದು ತುಳು ನಾಡಿನ ವೈಶಿಷ್ಟ್ಯ .

 

                                      ಕನ್ನಡ ಬೀರ -ತುಳುವರ ದೈವವಾದ ಬ್ರಿಟಿಶ್ ಸುಬೇದಾರ
 

                                                                ಕನ್ನಡ ಭೂತ

ತುಳುನಾಡಿನಲ್ಲಿ ದೈವತ್ವವನ್ನು ಪಡೆದವರೆಲ್ಲ ಹಿಂದುಗಳು, ತುಳುನಾಡಿನವರೇ ಆಗಬೇಕಿಲ್ಲ. ಅನೇಕ ಕನ್ನಡ ಮೂಲದ ವ್ಯಕ್ತಿಗಳು. ತುಳುನಾಡಿನಲ್ಲಿ ಭೂತ ಗಳಾಗಿ ಆರಾಧಿಸಲ್ಪಡುತ್ತಿದ್ದಾರೆ ಕನ್ನಡ ಬೀರ, ಬಚ್ಚನಾಯಕ, ಬೈಸು ನಾಯಕ, ಕರಿಯಣ್ಣ ನಾಯಕ, ಕಚ್ಚೆ ಭಟ್ಟ, ಕನ್ನಡ ಭೂತ, ಕನ್ನಡ ಭೂತ ಯಾನೆ ಪುರುಷ ಭೂತ,ಕನ್ನಡಿಗ ಭೂತ ಮೊದಲಾದವರು ಮೂಲತಃ ಕನ್ನಡ ಭಾಷಿಗರು ಆಗಿದ್ದವರು

ತುಳು ನಾಡಿನಲ್ಲಿ ಯಾರಿಗೆ ಹೇಗೆ ಯಾವಾಗ ದೈವತ್ವ ಪ್ರಾಪ್ತಿಯಾಗುತ್ತದೆ ಹೇಳುವುದಕ್ಕೆ ಒಂದು ಸಿದ್ಧ ಸೂತ್ರವಾಗಲಿ ನಿಯಮವಾಗಲಿ ಏನೂ ಇಲ್ಲ .ದುರಂತವನ್ನಪ್ಪಿದ ಅಸಹಾಯ ಶೂರರು ಮಾತ್ರ ಭೂತಗಳಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ .ಮನುಷ್ಯ ಮೂಲದಿಂದ ಭೂತ ಸ್ಥಿತಿಗೇರಿದವರು ಎಲ್ಲರೂ ಮೂಲತಃ ಸಾತ್ವಿಕರೂ, ಸದ್ಧರ್ಮಿಗಳೂ, ಸಾಧ್ವಿಗಳೂ, ಶೂರರೂ ಎನ್ನುವಂತಿಲ್ಲ. ಅಂಥಹ ಉದಾತ್ತ ಚರಿತರು ವಿರಳವಾಗಿ ಕೆಲವರಿರಬಹುದು. ವಿಶೇಷಗುಣಗಳಿಲ್ಲದ ತೀರಾ ಸಾಮಾನ್ಯರೂ ಬೇರೆಬೇರೆ ಕಾರಣಗಳಿಂದ ದೈವತ್ವವನ್ನು ಪಡೆದಿದ್ದಾರೆ. ಆಕಸ್ಮಿಕ ಮರಣಕ್ಕೆ ಗುರಿಯಾದವರು ದೈವಗಳ ಕಾರಣೀಕಗಳು ಸೇರಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ.ಪ್ರಧಾನ ಭೂತ ಗಳಾದ ಉಲ್ಲಾಕುಳು ಶಿರಾಡಿ ,ಮಲರಾಯಿ ,ಬಬ್ಬರ್ಯ ,ಪಂಜುರ್ಲಿ ,ಮೊದಲಾದ ಭೂತ ಗಳ ಅನುಗ್ರಹದಿಂದ ಅನೇಕರು ಸೇರಿಗೆ ದೈವಗಳಾಗಿದ್ದಾರೆ.ಅಂತೆಯೇ ಈ ಭೂತ ಗಳ ಆಗ್ರಹಕ್ಕೆ ತುತ್ತಾಗಿಯೂ ಅನೇಕರಿಗೆ ದೈವತ್ವ ಲಭಿಸಿದೆ
ತುಳುನಾಡಿನ ಲ್ಲಿ ಎಷ್ಟು ಭೂತಗಳಿಗೆ ಆರಾಧನೆ ಇದೆ ಎಂಬ ಬಗ್ಗೆ ಇಷ್ಟೇ ಎಂಬ ಇದಮಿತ್ಥಂ ಉತ್ತರಿಸಲು ಸಾಧ್ಯವಿಲ್ಲ
ಈ ಬಗ್ಗೆ ಡಾ.ಚಿನ್ನಪ್ಪ ಗೌಡು ಸುಮಾರು ನಾನ್ನೂರು ಭೂತ ಗಳಿಗೆ ಅರಾಧನೆ ಇದೆ ಎಂದಿದ್ದಾರೆ ಅವರು ಸುಮಾರು ಮುನ್ನೂರು ಭೂತಗಳ ಹೆಸರನ್ನು ಸಂಗ್ರಹಿಸಿದ್ದಾರೆ


ಅದರೆ ನನಗೆ ಎರಡುಸಾವಿರದ ಮುನ್ನೂರ  ಅರು ವತ್ತು ಭೂತಗಳ ಹೆಸರುಗಳು ಸಿಕ್ಕಿವೆ, 

1253 ದೈವಗಳ ಮಾಹಿತಿ ಯನ್ನು ನನ್ನ ಕರಾವಳಿಯ ಸಾವಿರದೊಂದು ದೈವಗಳು ಗ್ರಂಥದಲ್ಲಿ ನೀಡಿದ್ದೇನೆ 
ಹಾಗಾಗಿ ದಕ್ಷಿಣ ಕನ್ನಡ ಉಡುಪಿ ಕಾಸರಗೋಡು ಕೊಡಗು ಪರಿಸರದಲ್ಲಿ ಆರಾದನೆ ಗೊಳ್ಳುವ ಎಲ್ಲ ಭೂತಗಳನ್ಮು ಲೆಕ್ಕ ಹಾಕಿದರೆ ಒಂದೂವ ೆ ಸಾವಿರಕ್ಕೂ ಹೆಚ್ಚು ಭೂತ ಗಳಿಗೆ ಆರಾಧನೆ ಇದೆ ಎಂದು ನಿಶ್ಚಿತವಾಗಿ ಹೇಳಬಹುದು

(ಸೂಚನೆ:ನನ್ನ ಎಲ್ಲ ಬರಹಗಳಿಗೆ ಕಾಪಿ ರೈಟ್ಸ್ ಇದೆ )

©ಡಾ.ಲಕ್ಷ್ಮೀ ಜಿ ಪ್ರಸಾದ 

ಕನ್ನಡ ಉಪನ್ಯಾಸಕರು 

ಸರ್ಕಾರಿ ಪದವಿ ಪೂರ್ವ ಕಾಲೇಜು 

ಬೆಂಗಳೂರು 

ಮೊಬೈಲ್ 9480516684

Category:Stories



ProfileImg

Written by Dr Lakshmi G Prasad

Verified